
ಬಳ್ಳಾರಿ :ಬಿಜೆಪಿ ಸರ್ಕಾರ ನೀಡಿದ ವಾಗ್ದಾನದಂತೆ ಕೊಳಗೇರಿ ಪ್ರದೇಶದಲ್ಲಿ ವಾಸಿಸುವ ಜನರಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುತ್ತಿದ್ದು, ಈ ತಿಂಗಳಾಂತ್ಯದವರೆಗೆ ಹಕ್ಕು ಪತ್ರಗಳನ್ನು ವಿತರಿಸುವ ಕಾರ್ಯ ಮುಂದುವರಿಯಲಿದೆ ಎಂದು ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಸೋಮಶೇಖರ್ ರೆಡ್ಡಿ ತಿಳಿಸಿದ್ದಾರೆ.
ಬಳ್ಳಾರಿ ಮಹಾನಗರ ಪಾಲಿಕೆಯ 35 ಮತ್ತು 36ನೇ ವಾರ್ಡಿನ ಹಲವಾರು ಕೊಳಗೇರಿ ಪ್ರದೇಶಗಳಿಗೆ ತೆರಳಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಸತಿ ಸಚಿವ ವಿ.ಸೋಮಣ್ಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರ ಸೂಚನೆಯ ಮೇರೆಗೆ ಬಡವರಿಗೆ ಮತ್ತು ಕೊಳಗೇರಿ ನಿವಾಸಿಗಳಿಗೆ ಈ ಹಕ್ಕು ಪತ್ರಗಳನ್ನು ನೀಡಲಾಗುತ್ತಿದೆ. ವಸತಿ ಇಲಾಖೆಯ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಕೊಳಗೇರಿ ಜನತೆಯ ಮನೆ ಮನೆಗೂ ತೆರಳಿ ಸರ್ಕಾರದ ಯೋಜನೆಯನ್ನು ಮುಟ್ಟಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.