
ದೊಡ್ಡಬಳ್ಳಾಪುರ: ವಕೀಲರ ಸಂರಕ್ಷಣಾ ಕಾಯ್ದೆ ಶೀಘ್ರ ಜಾರಿಗೆ ತರುವಂತೆ ಆಗ್ರಹಿಸಿ ನಗರದಲ್ಲಿ ವಕೀಲರು ಸೋಮವಾರ ಪ್ರತಿಭಟನೆ ನಡೆಸಿದರು.ನಗರದ ಕೋರ್ಟ್ ಮುಂದೆ ಪ್ರತಿಭಟನೆ ನಡೆಸಿದ ವಕೀಲರು, ಸರ್ಕಾರದ ವಿಳಂಬ ಧೋರಣೆಯನ್ನು ಖಂಡಿಸಿದರು.
ರಾಜ್ಯದ ಹಲವೆಡೆ ವಕೀಲರ ಮೇಲೆ ಹಲ್ಲೆನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಾದರೆ ವಕೀಲರ ಸಂರಕ್ಷಣಾ ಕಾಯ್ದೆ ಜಾರಿಯೊಂದೇ ಪರಿಹಾರ ಎಂದು ಹೇಳಿದರು.
ಈಗಾಗಲೇ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರುವುದಾಗಿ ಹೇಳಿದೆ. ಆದರೆ, ಇನ್ನೂ ಜಾರಿಗೆ ತಂದಿಲ್ಲ. ಬಜೆಟ್ ಅಧಿವೇಶನದಲ್ಲಿ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲೇಬೇಕು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘ ಒತ್ತಾಯಿಸುತ್ತಿದೆ ಎಂದರು. ಒಂದು ವೇಳೆ ವಕೀಲರ ಸಂರಕ್ಷಣಾ ಕಾಯ್ದೆಯನ್ನು ಜಾರಿಗೆ ತರದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಪ್ರಭಾಕರ್.ಆರ್, ಶ್ರೀನಿವಾಸ, ಶಾಂತಲಾ ಸೆರಿ ಹಲವರು ಉಪಸ್ಥಿತರಿದ್ದರು.