ಬೆಂಗಳೂರು :, ಫೆ. 15: ‘ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೈಟೆಕ್ ಬಸ್‍ನಿಲ್ದಾಣಗಳನ್ನುಪ್ರಸ್ತುತ ಸಂದರ್ಭದಲ್ಲಿ ಸಾಧ್ಯವಿಲ್ಲ’ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಬುಧವಾರ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಕೆ.ಅನ್ನದಾನಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೋವಿಡ್ ಕಾರಣದಿಂದಾಗಿ ಅನೇಕ ಕಡೆ ಬಸ್ ಸಂಚಾರವೇ ಆಗಿಲ್ಲ.

ನೌಕರರು ಮತ್ತು ಸಿಬ್ಬಂದಿಗಳ ಕುಟುಂಬಕ್ಕೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಸರಕಾರ ಇಲಾಖೆಗೆ 6 ಸಾವಿರ ಕೋಟಿ ರೂ. ಸಾಲ ನೀಡಿದೆ’ ಎಂದು ಹೇಳಿದರು.

‘ಸಾರಿಗೆ ಇಲಾಖೆಯ ಬಹುತೇಕ ಎಲ್ಲ ನಿಗಮಗಳು ನಷ್ಟದಲ್ಲಿವೆ. ಇಂತಹ ಸಂದರ್ಭದಲ್ಲಿ ನಾವು ಹೈಟೆಕ್ ಬಸ್ ನಿಲ್ದಾಣಗಳನ್ನು ನಿರ್ಮಿಸಲು ಹೇಗೆ ಸಾಧ್ಯ? ಹೊಸ ಬಸ್‍ಗಳ ಖರೀದಿಗೆ ತೀರ್ಮಾನ ಮಾಡಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಆ ಬಳಿಕ ಆದ್ಯತೆ ಮೇಲೆ ಹೊಸ ಬಸ್‍ಗಳನ್ನು ಒದಗಿಸಲಾಗುವುದು ಎಂದು ಅವರು ತಿಳಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಜೆಡಿಎಸ್ ಸದಸ್ಯ ಡಿ.ಸಿ.ತಮ್ಮಣ್ಣ, ‘ನಾನು ಸಾರಿಗೆ ಸಚಿವನಾಗಿ ಕೆಲಸ ಮಾಡಿದ್ದು ಮದ್ದೂರು, ಮಂಡ್ಯ, ಮಳವಳ್ಳಿ ಕ್ಷೇತ್ರಗಳಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲು ಅನುಮೋದನೆ ನೀಡಲಾಗಿತ್ತು. ಮೈತ್ರಿ ಸರಕಾರ ಪತನವಾದ ಬಳಿಕ ಈ ಪ್ರಸ್ತಾವನೆ ಕಾಗದದ ಮೇಲೆ ಉಳಿದೆ. ನಾನು ಯಾರಿಗೂ ತಾರತಮ್ಯ ಮಾಡಿರಲಿಲ್ಲ. ಉತ್ತರ ಕರ್ನಾಟಕದ ಅನೇಕ ಕಡೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದೆ ಎಂದು ಗಮನ ಸೆಳೆದರು.

error: Content is protected !!