
ಟಿಪ್ಪು ಸುಲ್ತಾನ್ ರವರನ್ನು ಹೊಡೆದಂತೆ ಸಿದ್ದರಾಮಯ್ಯನವರನ್ನು ಹೊಡೆಯಿರಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ ಸಚಿವರಾದ ಅಶ್ವಥ್ ನಾರಾಯಣ್ ರವರವರನ್ನು ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟದಿಂದ ವಜಾ ಗೊಳಿಸಬೇಕು.
ಗಂಗಾವತಿ ಸಮಾವೇಶದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಭರದಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ಭಯೋತ್ಪಾದಕರ ಪಕ್ಷ ಮತ್ತು ಕೋಮು ದ್ವೇಷ ಹರಡುವ ರೀತಿಯಲ್ಲಿ ಭಾಷಣ ಮಾಡಿದ್ದು ಖಂಡನೀಯ.
ಮಹಾತ್ಮ ಗಾಂಧಿಯವರ ಹತ್ಯೆ ಮಾಡಿದವರನ್ನು ಆರಾಧಿಸುವವರ ಬಾಯಲ್ಲಿ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ, ಸದಾ ಭ್ರಷ್ಟಾಚಾರದಲ್ಲಿ ತೊಡಗಿರುವ, ಕಮಿಷನ್ ದಂಧೆಯಲ್ಲಿ ನಿರತರಾಗಿರುವ ತಮ್ಮ ಪಕ್ಷದ ಶಾಸಕರ ಬಗ್ಗೆ ಮಾತನಾಡದೆ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದೆ, ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡದೆ ಬರೀ ಕೋಮು ಪ್ರಚೋದನೆ ಭಾಷಣಗಳ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸದಲ್ಲಿ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರು, ಸಚಿವರು ಮತ್ತು ಮಾಜಿ ಸಚಿವರು ನಿರತರಾಗಿದ್ದಾರೆ. ಸಚಿವರಾದ ಅಶ್ವತ್ ನಾರಾಯಣ್ ಅವರು ಸಿದ್ದರಾಮಯ್ಯನವರ ಕ್ಷಮೆಯಾಚಿಸಬೇಕು, ಕಟೀಲ್ ಅವರ ತಂಡದವರು ಗೋಡ್ಸೆ ಸಂಸ್ಕೃತಿಯಿಂದ ಹೊರಬರಬೇಕು ಎಂದು ಗಂಗಾವತಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಉಪಾಧ್ಯಕ್ಷರಾದ ವಿಶ್ವನಾಥ್ ಮಾಲಿ ಪಾಟೀಲ್ ಪತ್ರಿಕ ಹೇಳಿಕೆ ನೀಡಿದ್ದಾರೆ. ವಂಚನೆ ಆರೋಪದ ಮೇಲೆ ಇಬ್ಬರು ಶಾಸಕರಿಗೆ ಶಿಕ್ಷೆ ಪ್ರಕಟವಾಗಿದೆ, ಸದನದಲ್ಲಿ ನೀಲಿ ಚಿತ್ರವನ್ನು ನೋಡಿದವರು ಯಾವ ಪಕ್ಷದವರು ಎನ್ನುವುದನ್ನು ಮಾನ್ಯ ಕಟೀಲು ಅವರು ಉತ್ತರ ನೀಡಬೇಕು.