ಗಂಗಾವತಿ:    ರಾಜ್ಯದಲ್ಲಿ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಶೇಕಡ 26ರಷ್ಟು ಏರಿಕೆಯಾಗಿದೆ. ಹಾಗೆಯೇ ರಾಜ್ಯದಲ್ಲಿ ತೆರಿಗೆ ಸಂಗ್ರಹವು ಶೇಕಡ 20ರಷ್ಟು ಏರಿಕೆಯಾಗಿದೆ.ಮಾಜಿ ಕಾಡ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಹೇಳಿದರು.ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು  ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆಬ್ರವರಿ 17ರಂದು ಕರ್ನಾಟಕ ಬಜೆಟ್ 2023-24 ಮಂಡನೆ ಆರಂಭಿಸಿದ್ದಾರೆ. ಬಜೆಟ್‌ ಮಂಡನೆ ವೇಳೆ ಜಿಎಸ್‌ಟಿ ಹಾಗೂ ತೆರಿಗೆ ಸಂಗ್ರಹದ ಬಗ್ಗೆ ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ ಎಂದು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದರು


ರಾಜ್ಯದ ಹಣಕಾಸು ಪರಿಸ್ಥಿತಿ ಸದೃಢವಾಗಿದೆ. ತೆರಿಗೆ ಸಂಗ್ರಹವು ಅಧಿಕವಾಗಿದೆ. ಜಿಎಸ್‌ಟಿ ಸಂಗ್ರಹವು ಶೇಕಡ 26ರಷ್ಟು ಹೆಚ್ಚಳವಾಗಿದೆ. ತೆರಿಗೆ ಸಂಗ್ರಹ ಶೇಕಡ 20ರಷ್ಟು ಏರಿಕೆಯನ್ನು ಕಂಡಿದೆ. ಈ ವರ್ಷದ ಬಜೆಟ್‌ ಉತ್ತಮ ಬಜೆಟ್ ಆಗಿದೆ ಎಂದು ಹೇಳಲು ನಾನು ಸಂತಸ ಪಡುತ್ತೇನೆ ಮಾಜಿ ಕಾಡ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ತಿಳಿಸಿದರು


ಇನ್ನು ಮುದ್ರಣ ಹಾಗೂ ನೋಂದಣಿ ಶುಲ್ಕ ಸಂಗ್ರಹವೂ ಕೂಡಾ ಏರಿಕೆಯಾಗಿದೆ. 2023-24ನೇ ಸಾಲಿನಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರವು ರಾಜ್ಯದ ತೆರಿಗೆ ಪಾಲನ್ನು ಅಧಿಕಗೊಳಿಸಿದೆ. ಇದು ರಾಜ್ಯದಲ್ಲಿ ಸುಸ್ಥಿರತೆಯನ್ನು ಕಾಯ್ದುಕೊಳ್ಳಲು ನಮಗೆ ಸಹಾಯಕವಾಗಿದೆ.ಕೋವಿಡ್ ಸಂದರ್ಭದಲ್ಲಿ ಸರ್ಕಾರದ ಆರ್ಥಿಕ ಶಿಸ್ತಿನಲ್ಲಿ ಅಡೆತಡೆ ಉಂಟಾಗಿತ್ತು. ಆದರೆ ಈಗ ಪರಿಸ್ಥಿತಿ ಸುಧಾರಿಸಿದೆ. ಈ ವರ್ಷದ ಬಜೆಟ್‌ ರೆವೆನ್ಯೂ ಉತ್ತಮ ಬಜೆಟ್ ಆಗಿದೆ.ಮುಖ್ಯಮಂತ್ರಿ ಬಸವರಾಜ್ ಭೋಮ್ಮಾಯಿರವರು  ಬೇರೆ ಬೇರೆ ಕೃಷಿ ಯೋಜನೆಗಳಿಗೆ ಮಾಡಿದ ವೆಚ್ಚಗಳ ಬಗ್ಗೆ ಮಾಹಿತಿ ಬಜೆಟ್ ನಲ್ಲಿ ಮಂಡಿಸಿದ್ದಾರೆ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನುಕೂಲ ಇರುವ ಬಜೆಟ್ ಎಂದರು.

error: Content is protected !!