ಕಲಬುರಗಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ವಿದ್ಯುತ್ ಬಿಲ್ ವಿಚಾರದಲ್ಲಿ ಲೈನ್ಮ್ಯಾನ್ ಮತ್ತು ಜನಸಾಮಾನ್ಯರ ನಡುವೆ ಜಟಾಪಟಿಗಳು ನಡೆಯುತ್ತಿದೆ. ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ಎಂದು ಕಾಂಗ್ರೆಸ್ ಹೇಳಿತ್ತು.
ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಯೋಜನೆ ಜಾರಿ ಮಾಡುವ ಮುನ್ನವೇ ಕೆಲ ಜನರು ವಿದ್ಯುತ್ ಬಿಲ್ ಕಟ್ಟುವುದಿಲ್ಲ ಎಂದು ಲೈನ್ಮ್ಯಾನ್ಗಳ ಜತೆ ಜಗಳಕ್ಕೆ ಇಳಿದಿದ್ದಾರೆ
.ಇಷ್ಟು ದಿನ ಬರೀ ಮಾತಿನಲ್ಲಿ ನಡೆಯುತ್ತಿದ್ದ ಜಗಳ ಇಂದು ಹಲ್ಲೆ ಮಾಡುವ ಮಟ್ಟಿಗೆ ಬೆಳೆದಿರುವುದು ನಿಜಕ್ಕೂ ಆತಂಕಕಾರಿ ಸಂಗತಿಯಾಗಿದೆ. ಕಲಬುರಗಿಯ ಆಳಂದ ಪಟ್ಟಣದಲ್ಲಿ ಜೆಸ್ಕಾಂ ಜೆಇ ಹಾಗೂ ಲೈನ್ಮ್ಯಾನ್ ಮೇಲೆ ಹಲ್ಲೆ ಮಾಡಲಾಗಿದೆ. ಬಾಕಿ ಇರುವ ಕರೆಂಟ್ ಬಿಲ್ ಕಟ್ಟುವಂತೆ ಕೇಳಿದ್ದಕ್ಕೆ ಜೆಇ ಸಿದ್ದರಾಮಪ್ಪ ನಿಂಬಾಳ್ಕರ್ ಹಾಗೂ ಲೈನ್ಮ್ಯಾನ್ ಇಜಾಜ್ ಮೇಲೆ ವಸೀಂ ಸೈಫನ್ ಎಂಬಾತ ಕಲ್ಲು ಮತ್ತು ಕಬ್ಬಿಣದ ರಾಡ್ನಿಂದ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾನೆ.