ಗೃಹಜ್ಯೋತಿ ಯೋಜನೆಗೆ ಯಾವಾಗಿನಿಂದ ಅರ್ಜಿ ಸ್ವೀಕರಿಸಬೇಕು ಎನ್ನುವುದನ್ನು ತಿಳಿಸಿಲ್ಲ. ಸರ್ಕಾರದಿಂದ ಗೈಡ್ ಲೈನ್ಸ್ ಬಂದ ಕೂಡಲೇ ಅರ್ಜಿ ಸ್ವಿಕರಿಸಲಾಗುತ್ತದೆ ಎಂದು ಸೇವಾ ಸಿಂಧು ಆಯಪ್​ ಡೈರೆಕ್ಟರ್ ದಿಲೀಶ್ ಶಶಿ ಸ್ಪಷ್ಟನೆ ನೀಡಿದ್ದಾರೆ

ಬೆಂಗಳೂರು: ಗೃಹಜ್ಯೋತಿ ಯೋಜನೆಯ (Gruha Jyoti scheme)ಲಾಭ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವಂತೆ ಸರ್ಕಾರ ಸೂಚನೆ ನೀಡಿದೆ.

ಆದರೆ ಇತ್ತ ಅರ್ಜಿ ಸಲ್ಲಿಸಲು ಅಪ್ಲಿಕೇಶನ್ ಓಪನ್ ಆಗುತ್ತಿಲ್ಲ ಎಂದು ಫಲಾನುಭವಿಗಳು ದೂರಿದ್ದರು. ಸದ್ಯ ಈ ಕುರಿತಾಗಿ ಸೇವಾ ಸಿಂಧು ಆಯಪ್ (Seva Sindhu)​ ಡೈರೆಕ್ಟರ್ ದಿಲೀಶ್ ಶಶಿ ಸ್ಪಷ್ಟನೆ ನೀಡಿದ್ದಾರೆ. ಸದ್ಯ ಯಾವಾಗಿನಿಂದ ಅರ್ಜಿ ಸ್ವೀಕರಿಸಬೇಕು ಎನ್ನುವುದನ್ನು ತಿಳಿಸಿಲ್ಲ. ಸರ್ಕಾರದಿಂದ ಗೈಡ್ ಲೈನ್ಸ್ ಬಂದ ಕೂಡಲೇ ಅರ್ಜಿ ಸ್ವೀಕರಿಸಲಾಗುತ್ತದೆ ಎಂದು ಸ್ಪಷ್ಟನೆ ನೀಡಿದರು.

ಅರ್ಜಿಗೆ ಆಧಾರ್ ಕಾರ್ಡ್, ಪಾನ್ ಕಾರ್ಡ್ ಬೇಕು

ಸದ್ಯ ಅರ್ಜಿಗೆ ಆಧಾರ್ ಕಾರ್ಡ್, ಪಾನ್ ಕಾರ್ಡ್ ದಾಖಾಲೆಗಳನ್ನ ಕೊಡಬೇಕಾಗುತ್ತದೆ. ಒಂದೇ ದಾಖಾಲೆಯಲ್ಲಿ ಎಲ್ಲಾ ಸ್ಕೀಮ್​ಗಳನ್ನ ಮಾಡುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಎಲ್ಲಾ ಸ್ಕೀಮ್​ಗಳಿಗೆ ವಿವಿಧ ದಾಖಾಲೆಗಳನ್ನ ಪಡೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ಅರ್ಜಿ ಸಲ್ಲಿಸುವುದು ಎಲ್ಲಿ?

ಬೆಂಗಳೂರಿನ ಜನರು ಬೆಂಗಳೂರು ಒನ್ ಕೇಂದ್ರಗಳಲ್ಲಿ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು. ಗ್ರಾಮ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ಆಯಪ್​​ ಅನ್ನು ಮೊಬೈಲ್​ನಲ್ಲಿಯೂ ಬಳಸಬಹುದು. ಸದ್ಯ ನಮ್ಮ‌ಹೆಲ್ಪ್ ಲೈನ್​ಗೆ ಸಾಕಷ್ಟು ಕರೆಗಳು ಬರುತ್ತಿವೆ ಎಂದರು.

ಪ್ರತಿದಿನ 50 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನ ಹಾಕಬಹುದು. ಇದಕ್ಕೆ ತುಂಬ ಸಮಯ ಸಹ ಹಿಡಿಯೋದಿಲ್ಲ. ಸಾಧ್ಯವಾದಷ್ಟು ಸರ್ಕಾರದ ಅಧೀನದಲ್ಲಿರುವ ಸೆಂಟರ್​ಗಳಲ್ಲಿ ಅರ್ಜಿ ಹಾಕುವುದು ಒಳಿತು. ಇಲ್ಲದಿದ್ದರೆ ಸೈಬರ್ ಸೆಂಟರ್​ಗಳಲ್ಲಿ ಹೆಚ್ಚು ಹಣ ಪಡೆಯುತ್ತಾರೆ ಎಂದು ತಿಳಿಸಿದರು.

ಸರ್ಕಾರದಿಂದ ಸದ್ಯ ನಾಲ್ಕು ಸ್ಕೀಮ್​​ಗಳನ್ನ ನೋಂದಣಿ ಮಾಡುವುದಕ್ಕೆ ಹೇಳಿದ್ದಾರೆ. ರಿಜಿಸ್ಟ್ರೇಷನ್ ಮಾಡಲು ಸದ್ಯ ಆಯಪ್ ಡೆವೆಲಪ್ ಮಾಡಲಾಗುತ್ತಿದೆ. ಎಲ್ಲಾರೂ ಸರ್ವೇ ಸಮಾನ್ಯವಾಗಿ ಬಳಸುವ ಐಡಿ ಡಿಟೇಲ್ಸ್​ಗಳನ್ನ ಪಡೆದುಕೊಳ್ಳಲಾಗುತ್ತದೆ. ಸದ್ಯ ಈ ಆಯಪ್​ನಲ್ಲಿ‌ 70 ಇಲಾಖೆಗಳು ಉಪಯೋಗ ಪಡೆದುಕೊಳ್ಳುತ್ತಿವೆ. ಈ ಆಧಾರದ ಮೇಲೆ ಈ ಸ್ಕೀಮ್​ಗಳನ್ನ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದರು.

error: Content is protected !!