‘
ಗಂಗಾವತಿ :ಮಂತ್ರಿಯವರ ಅವರ ಮುಖ್ಯ ಕಾರ್ಯದರ್ಶಿಗಳು, ಬೆಂಗಳೂರು ರವರ ಪತ್ರ ಸಂಖ್ಯೆ Acsen/T/147/2023, ದಿನಾಂಕ:16.09.2023 ರ ಮೂಲಕ, ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಮಾನ್ಯ ಮುಖ್ಯ ಮಂತ್ರಿಗಳಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದು, ಸದರಿ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ, ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಂಡು ಜನರ ಅಹವಾಲುಗಳನ್ನು ಆಲಿಸಿ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಒದಗಿಸುವುದು ಸೂಕ್ತವಾಗಿರುತ್ತದೆಂದು ತಿಳಿಸಿದಂತೆ.
ದಿನಾಂಕ:25.09,2023 ಸೋಮವಾರದಂದು ಕೊಪ್ಪಳ ಜಿಲ್ಲೆಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಬೆಳಿಗ್ಗೆ 10-00 ಗಂಟೆಯಿಂದ ಸಾಯಂಕಾಲ 05-30 ಗಂಟೆಯವರೆಗೆ “ಜನತಾ ದರ್ಶನ” ಕಾರ್ಯಕ್ರಮ ಆಯೋಜಿಸಲಾಗಿರುತ್ತದೆ. ಆದುದರಿಂದ ದಿನಾಂಕ:25,09,2023 ರಂದು ಸದರಿ “ಜನತಾ ದರ್ಶನ” ಕಾರ್ಯಕ್ರಮಕ್ಕೆ ಸಾರ್ವಜನಿಕರ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಹಾಗೂ ಸದರಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಲು ಈ ಮೂಲಕಪತ್ರಿಕೆ ಪ್ರಕಟಣೆ ಯಲ್ಲಿ ತಿಳಿಯಪಡಿಸಲಾಗಿದೆ.