ಬೆಂಗಳೂರು: ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಅವರನ್ನು 35 ದಿನಗಳ ಬಳಿಕ ಬಂಧಿಸಲಾಗಿದೆ. ವಿದೇಶದಿಂದ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಪ್ರಜ್ವಲ್ರನ್ನು ಮಹಿಳಾ ಅಧಿಕಾರಿಗಳು ಬಂಧಿಸಿದ್ದಾರೆ.
ಏರ್ಪೋರ್ಟ್ನಲ್ಲಿ ಗುರುವಾರ ಮಧ್ಯರಾತ್ರಿ 12:40 ರ ಸುಮಾರಿಗೆ ಪ್ರಜ್ವಲ್ ಬಂಧನವಾಯಿತು.
ಮೂವರು ಮಹಿಳಾ ಅಧಿಕಾರಿಗಳ ಮೂಲಕ ಆರೋಪಿಯನ್ನು ಎಸ್ಐಟಿ ಬಂಧಿಸಿದೆ. ಅದು ಯಾಕೆ ಎಂಬ ಬಗ್ಗೆ ಚರ್ಚೆ ಶುರುವಾಗಿದೆ.
ಜೀಪ್ ಚಾಲಕ ಹೊರತು ಪಡಿಸಿದರೆ ಉಳಿದವರೆಲ್ಲಾ ಮಹಿಳಾ ಅಧಿಕಾರಿಗಳು, ಸಂಸದನ ಬಂಧನ ಸಂದರ್ಭದಲ್ಲಿದ್ದರು. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಮುಜುಗರ ಉಂಟುಮಾಡುವ ನಿಟ್ಟಿನಲ್ಲಿ ಬಂಧನವಾಗಿದೆ ಎಂದು ಮೂಲಗಳು ತಿಳಿಸಿವೆ.
ಅಲ್ಲದೇ ಸಂತ್ರಸ್ತ ಮಹಿಳೆಯರಿಗೆ ಧೈರ್ಯ ತುಂಬಬೇಕು. ನಾವಿದ್ದೇವೆ ಧೈರ್ಯವಾಗಿ ಬಂದು ದೂರು ನೀಡುವಂತೆ ಸಂದೇಶ ರವಾನಿಸಬೇಕು. ಹೀಗಾಗಿ ಮಹಿಳಾ ಅಧಿಕಾರಿಗಳಿಂದ ಎಸ್ಐಟಿ ಬಂಧನ ಮಾಡಿಸಿದೆ.