ಗಂಗಾವತಿ ಡಿ 07:ಅಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಹಾಗೂ ಅಲ್ ಇಂಡಿಯಾ ಬಹುಜನ ಪರಿಷತ್ ಕೊಪ್ಪಳ ಜಿಲ್ಲಾ ಸಮಿತಿ ಯಿಂದ ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸಂವಿಧಾನ ಶಿಲ್ಪಿ ಮಹಾನ್ ಮಾನತಾವಾದಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 68ನೇ ವರ್ಷದ ಪರಿ ನಿರ್ಮಾಣ ಅಂಗ ವಾಗಿ ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಯ ಬಗ್ಗೆ ಇಂದು ಶಾಲಾ ಮಕ್ಕಳ ಪ್ರಬಂಧ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಪ್ರಬಂಧ ಸ್ಪರ್ಧೆಯಲ್ಲಿ ವಿವಿಧ ಶಾಲೆಯ ಮಕ್ಕಳು ಸುಮಾರು 108 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶಂಕರ್ ಸಿದ್ದಾಪುರ ಮಾತನಾಡಿ ಮಕ್ಕಳು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕ್ರಿಯಾಶೀಲತೆಯನ್ನು ಹೊಂದಬೇಕು ಡಾ. ಬಿಆರ್ ಅಂಬೇಡ್ಕರ್ ಅವರ ಆಶಯದಂತೆ ಎಲ್ಲರೂ ಶಿಕ್ಷಣವಂತರಾಗಿ ಸಮಾನತೆ ಹೊಂದಬೇಕೆಂದು ಈ ಸಂದರ್ಭದಲ್ಲಿ ತಿಳಿಸಿದರು. ಪ್ರಬಂಧ ವಿಜೇತ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ 3000 ದ್ವಿತೀಯ ಬಹುಮಾನ 2000 ತೃತೀಯ ಬಹುಮಾನ 1000 ಹಾಗೂ . ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ.ದಿನಾಂಕ 11 12 2024 ಬುದುವಾರ ಕನ್ನಡ ಸಾಹಿತ್ಯ ಭವನ ದಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ ನಡೆಸಲಾಗುತ್ತದೆ.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಪಕ್ಷದ ಸಂಘಟನಾಕಾರರು, ಮೂರ್ತಿ ಸಂಗಾಪುರ ರಮೇಶ್ ಕಾಳಿ ಮಲ್ಲೇಶ್ ನಾಯ್ಕ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.